July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ.


ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Related posts

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya
error: Content is protected !!