32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ.


ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Related posts

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!