25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ.


ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!