July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮೇ 18 ರಂದು ಅಂಗಣೋತ್ಸವ, ರಾತ್ರಿ ಮಹಾ ರಥೋತ್ಸವ, ಕವಾಟ ಬಂಧನ ನಡೆಯಿತು. ಮೇ. 19 ರಂದು ಕವಾಟೋದ್ಘಾಟನೆ , ಮಹಾಪೂಜೆ, ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭೃತೋತ್ಸವ, ಧ್ವಜ ಅವರೋಹಣ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ಅರ್ಚಕರು, ಸಮಿತಿಯ ಸದಸ್ಯರು, ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಇಂದು (ಮೇ 20) ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ ನಡೆಯಲಿದೆ. ಮೇ.21 ರಂದು ಪೂರ್ವಾಹ್ನ ಶುದ್ಧ ಕಲಶ ಸಂಪ್ರೋಕ್ಷಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Related posts

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!