ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ನ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

2024-25ನೇ ಸಾಲಿನ ತಾಲೂಕಿನ ಪ್ರಥಮ ಲೆಕ್ಕ ಪರಿಶೋಧನೆಯನ್ನು ಅರಸಿನಮಕ್ಕಿ ವಲಯದ ಶಿಬಾಜೆ ಕಾರ್ಯಕ್ಷೇತ್ರದ ಪೆರ್ಲ ಒಕ್ಕೂಟದಲ್ಲಿ ಕೇಂದ್ರಕಛೇರಿಯ ಗುಂಪು ಪರಿಶೋಧಕರಾದ ಆನಂದ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಹೆಚ್.ಎಸ್ ಚೆನ್ನಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ವನಿತಾ ವಿ ಶೆಟ್ಟಿಗಾರ್, ನೂತನ ಅಧ್ಯಕ್ಷರಾದ ಅಣ್ಣುಗೌಡ, ಆಂತರಿಕ ಲೆಕ್ಕ ಪರಿಶೋಧಕರಾದ ಶಿವರಾಮ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ, ತಂಡದ ಪ್ರಬಂಧಕರು, ಸಂಯೋಜಕರು, ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಅರುಣಾ, ಗಣೇಶ್, ಯೋಗೀಶ ಉಪಸ್ಥಿತರಿದ್ದರು.

Leave a Comment

error: Content is protected !!