24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

ಉಜಿರೆ ರುಡ್‌ಸೆಟ್ ಸಂಸ್ಥೆಯ2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ, ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಂ ಸುರೇಶ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

2023-24ರ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ಗುರಿಯನ್ನು ತಲುಪಲು ಕೆಲವು ಮಾರ್ಗದರ್ಶನವನ್ನು ತಿಳಿಸಿದರು. ಸಂಸ್ಥೆಯು ಕಳೆದ ವರ್ಷದಲ್ಲಿ 762 ಶಿಭಿರಾರ್ಥಿಗಳಿಗೆ ವಿವಿಧ ತರಬೇತಿಗಳನ್ನು ಕೊಟ್ಟು ಅದರಲ್ಲಿ 577 ಯುವಕ/ಯುವತಿಯರು ಸ್ವಂತ ಉದ್ಯೋಗವನ್ನು ಪ್ರಾರಂಭಿಸಿದ್ದಾರೆ. ಹೊಸ ತರಬೇತಿಗಳಾಗಿ ಕೋಳಿ ಸಾಕಾಣಿಕೆ, ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ಮತ್ತು ಮದುಮಗಳ ಶೃಂಗಾರ ಮೊದಲಾದ ತರಬೇತಿಗಳನ್ನು ಹಮ್ಮಿ ಕೊಂಡಿರುತ್ತೇವೆ. ಕಳೆದ ವರ್ಷದಲ್ಲಿ ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ರವರು ಮತ್ತು ಸಂತೋಷ್ ಕುಮಾರ್ ತಿವಾರಿ, ನಿರ್ದೇಶಕರು, ಗ್ರಾಮೀಣ ಸಚಿವಾಲಯ, ದೆಹಲಿ, ಸಂಸ್ಥೆಗೆ ಭೇಟಿ ನೀಡಿದ್ದರು. ಜೊತೆಗೆ ಬ್ಯಾಂಕಿನ ಅಧಿಕಾರಿಗಳು, ಉದ್ಯಮಿಗಳು ಮತ್ತು ಸರಕಾರಿ ಉನ್ನತ ಅಧಿಕಾರಿಗಳು ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

Related posts

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!