September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.


ಮೇ 22 ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮೇ 23 ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Related posts

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya
error: Content is protected !!