25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

ಉಜಿರೆ ರುಡ್‌ಸೆಟ್ ಸಂಸ್ಥೆಯ2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ, ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಂ ಸುರೇಶ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

2023-24ರ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ಗುರಿಯನ್ನು ತಲುಪಲು ಕೆಲವು ಮಾರ್ಗದರ್ಶನವನ್ನು ತಿಳಿಸಿದರು. ಸಂಸ್ಥೆಯು ಕಳೆದ ವರ್ಷದಲ್ಲಿ 762 ಶಿಭಿರಾರ್ಥಿಗಳಿಗೆ ವಿವಿಧ ತರಬೇತಿಗಳನ್ನು ಕೊಟ್ಟು ಅದರಲ್ಲಿ 577 ಯುವಕ/ಯುವತಿಯರು ಸ್ವಂತ ಉದ್ಯೋಗವನ್ನು ಪ್ರಾರಂಭಿಸಿದ್ದಾರೆ. ಹೊಸ ತರಬೇತಿಗಳಾಗಿ ಕೋಳಿ ಸಾಕಾಣಿಕೆ, ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ಮತ್ತು ಮದುಮಗಳ ಶೃಂಗಾರ ಮೊದಲಾದ ತರಬೇತಿಗಳನ್ನು ಹಮ್ಮಿ ಕೊಂಡಿರುತ್ತೇವೆ. ಕಳೆದ ವರ್ಷದಲ್ಲಿ ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ರವರು ಮತ್ತು ಸಂತೋಷ್ ಕುಮಾರ್ ತಿವಾರಿ, ನಿರ್ದೇಶಕರು, ಗ್ರಾಮೀಣ ಸಚಿವಾಲಯ, ದೆಹಲಿ, ಸಂಸ್ಥೆಗೆ ಭೇಟಿ ನೀಡಿದ್ದರು. ಜೊತೆಗೆ ಬ್ಯಾಂಕಿನ ಅಧಿಕಾರಿಗಳು, ಉದ್ಯಮಿಗಳು ಮತ್ತು ಸರಕಾರಿ ಉನ್ನತ ಅಧಿಕಾರಿಗಳು ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya
error: Content is protected !!