25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.


ಮೇ 22 ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮೇ 23 ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya
error: Content is protected !!