ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.


ಮೇ 22 ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮೇ 23 ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Leave a Comment

error: Content is protected !!