22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.


ಮೇ 22 ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮೇ 23 ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya
error: Content is protected !!