September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.


ಮೇ 22 ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮೇ 23 ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Related posts

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya
error: Content is protected !!