25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.


ಮೇ 22 ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮೇ 23 ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya
error: Content is protected !!