25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮೋತ್ಸವ ನಡೆಯಿತು.

ಈ ವೇಳೆಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ, ಅರ್ಚಕರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
error: Content is protected !!