ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಮೇ 21ರಂದು ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವ ವನ್ನು ತಾಲ್ಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರ ನಡೆಸಲು ಸಹಕಾರ ನೀಡಿದ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇದ್ದುಕೊಂಡು ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ನೀಡಿದರು.

Leave a Comment

error: Content is protected !!