ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

ಉಜಿರೆ: ಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಮೇ 22 ರಂದು ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಮತ್ತು ಧರ್ಮಸ್ಥಳದ ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಸೇವಾಕರ್ತರ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು.
ಶುದ್ಧವಾದ ಗಾಳಿ, ನೀರು ಮತ್ತು ಪ್ರಶಾಂತ ಪ್ರಾಕೃತಿಕ ಪರಿಸರದಿಂದ ನಾವು ಉತ್ತಮ ಆರೋಗ್ಯಭಾಗ್ಯವನ್ನು ಹೊಂದಬಹುದು. ಸೇವಾಮನೋಭಾವದಿಂದ ಸಂಪಾದಿಸಿದ ಪುಣ್ಯ ಶಾಶ್ವತವಾಗಿರುತ್ತದೆ. ದೇವರಿಗೆ ಪ್ರಿಯವಾದ ಸೇವೆ ಮಾಡುವುದರಿಂದ ಆತ್ಮತೃಪ್ತಿ ಮತ್ತು ಸಂತೋಷ ಸಿಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, “ಶೌರ್ಯ’’ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಸಾರ್ವಜನಿಕರು, ಭಕ್ತರು ಹಾಗೂ ಗ್ರಾಮಸ್ಥರು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

Related posts

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya
error: Content is protected !!