July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತನಗೆ ಹಾಗೂ ತನ್ನ ಮಗನಿಗೆ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಸಾರ್ವಜನಿಕರ ಎದುರಿನಲ್ಲಿ ಅನುಚಿತವಾಗಿ ವರ್ತಿಸಿರುವುದಲ್ಲದೇ, ನನ್ನ ಮಗನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಬಳಂಜ ನಿವಾಸಿ ರತ್ನಾವತಿ ಅವರು ಬಳಂಜ ಪ್ರಕಾಶ್ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.


ಸಂತ್ರಸ್ತ ಮಹಿಳೆ ರತ್ನಾವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ತನ್ನ ಮಗ, ಅಶ್ವಿನ್ ಹಾಗೂ ಬಳಂಜ ನಿವಾಸಿ ಪ್ರಕಾಶ್‌ ಶೆಟ್ಟಿ ಎಂಬಾತನಿಗೂ ಈ ಹಿಂದೆಯೇ ಮನಸ್ತಾಪವಿದ್ದು, ಮೇ 20 ರಂದು ರಾತ್ರಿ, ಬಳೆಂಜ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ, ವಿದ್ಯುತ್ ಸ್ಥಗಿತಗೊಂಡಿದ್ದು, ನನ್ನ ಮಗ ಹಾಗೂ ಮತ್ತೋರ್ವ ಜನರೇಟರ್ ಸ್ಟಾರ್ಟ್ ಮಾಡಲು ಹೋದಾಗ, ಕತ್ತಲಿನಲ್ಲಿ ನನ್ನ ಮಗ ಆಕಸ್ಮಿಕವಾಗಿ ಪ್ರಕಾಶ್ ಶೆಟ್ಟಿಯವರಿಗೆ ತಾಗಿರುತ್ತಾನೆ. ಆಗ ಆರೋಪಿತನು ನನ್ನ ಮಗನಿಗೆ ಅವ್ಯಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದು, ಗಲಾಟೆಯ ಶಬ್ದ ಕೇಳಿ ಸ್ಥಳಕ್ಕೆ ಬಂದ ನನಗೂ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಸಾರ್ವಜನಿಕರ ಎದುರಿನಲ್ಲಿ ಅನುಚಿತವಾಗಿ ವರ್ತಿಸಿರುವುದಲ್ಲದೇ, ಮಗನನ್ನುದ್ದೇಶಿಸಿ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಆರೋಪಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ರತ್ನಾವತಿ ಹಾಗೂ ಹಾಗೂ ಅವರ ಮಗ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿ ನೀಡಿದ ದೂರಿನ ಮೇರೆಗೆ, ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ : 504, 323, 354, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya
error: Content is protected !!