September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

ಬೆಳ್ತಂಗಡಿ : ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನೆಲೆ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಇಂದು ಅವರ ಗರ್ಡಾಡಿಯ ನಿವಾಸಕ್ಕೆ ಆಗಮಿಸಿದ್ದಾರೆ.

ಎರಡು ಪ್ರಕರಣಗಳಲ್ಲಿ ಒಂದು ಪೊಲೀಸ್‌ ಠಾಣೆಗೆ ಅಕ್ರಮ ಪ್ರವೇಶ ಮಾಡಿ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಹಾಗೂ ಇನ್ನೊಂದು ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪ್ರಕರಣ ದಾಖಲಾಗಿದೆ.

ಪೊಲೀಸರು ಬಂಧನಕ್ಕೆ ಬಂದ ವಿಷಯ ತಿಳಿಯುತ್ತಲೇ ಹಲವಾರು ಕಾರ್ಯಕರ್ತ ಹರೀಶ್ ಪೂಂಜ ನಿವಾಸಕ್ಕೆ ಆಗಮಿಸಿದ್ದು, ಸರಕಾರದ ವಿರುದ್ಧ ಹಾಗೂ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya
error: Content is protected !!