23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ಗೌರವ ಕೊಟ್ಟು ಪೊಲೀಸರು ಕೊಟ್ಟ ನೋಟೀಸನ್ನು ತೆಗೆದುಕೊಂಡಿದ್ದು ಅದಕ್ಕೆ ಐದು ದಿನಗಳ ಕಾಲವಕಾಶವನ್ನು ಕೇಳಿ ಉತ್ತರವನ್ನು ಕೊಟ್ಟಿದ್ದಾರೆ. ಇದನ್ನು ಮೀರಿ ಪೊಲೀಸರು ಅವರನ್ನು ಬಂಧಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ ನೀಡಿದ ಸಂಸದ ಕಟೀಲ್ ಅವರು ಮಾತನಾಡಿ, ಶಾಸಕರು ಕಾನೂನಿಗೆ ಗೌರವ ಕೊಟ್ಟು ನೋಟೀಸು ತೆಗೆದುಕೊಂಡಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಪ್ರಕ್ರಿಯೆಯನ್ನು ಪೊಲೀಸರು ಮಾಡಬೇಕು, ಐದು ದಿನ ಕಾಲವಕಾಶವನ್ನು ಕೇಳಿದ್ದಾರೆ. ಶಾಸಕರ ಮೇಲೆ ಪೊಲೀಸರು ಒತ್ತಡ ಹಾಕಿ ಬಂಧಿಸಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.

ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ರಾಜ್ಯದಲ್ಲಿ ಸರಕಾರ ಮಾಡುತ್ತಿದೆ. ಶಾಸಕರನ್ನು ಮಟ್ಟ ಹಾಕಲು ಬಂಧಿಸಲು ಮುಂದಾಗಿದೆ ಉತ್ತರ ಕೊಡುತ್ತೇವೆ. ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ಸರಕಾರ ಮಾಡುತ್ತಿದೆ. ಮಾಡಿದೆ. ಇದು ಸಂವಿಧಾನ ವಿರೋಧಿ ಕೆಲಸ. ಸಿದ್ದರಾಮಯ್ಯ ಮೇಲೆ ಕೇಸು ಆಗಿದೆ ಯಾರೂ ನೋಟಿಸು ನಿಡಿಲ್ಲ,ನನ್ನ ಮೇಲೆ ಮೂರು ಕೇಸು ಇತ್ತು ಯಾರೂ ನೋಟಿಸು ನೀಡಿಲ್ಲ, ನಿರಾಪರಾಧಿಗಳ ಮೇಲೆ ಈ ರೀತಿ ಕೇಸು ಹಾಕುವುದು ಸರಿಯಲ್ಲ, ರಾಜಕೀಯ ಪ್ರೇರಿತವಾಗಿ ಪೊಲೀಸರು ಬಂಧಿಸುವ ಕಾರ್ಯ ಮಾಡಬಾರದು ಎಂದು ತಿಳಿಸಿದರು. .

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya
error: Content is protected !!