September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ಗೌರವ ಕೊಟ್ಟು ಪೊಲೀಸರು ಕೊಟ್ಟ ನೋಟೀಸನ್ನು ತೆಗೆದುಕೊಂಡಿದ್ದು ಅದಕ್ಕೆ ಐದು ದಿನಗಳ ಕಾಲವಕಾಶವನ್ನು ಕೇಳಿ ಉತ್ತರವನ್ನು ಕೊಟ್ಟಿದ್ದಾರೆ. ಇದನ್ನು ಮೀರಿ ಪೊಲೀಸರು ಅವರನ್ನು ಬಂಧಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ ನೀಡಿದ ಸಂಸದ ಕಟೀಲ್ ಅವರು ಮಾತನಾಡಿ, ಶಾಸಕರು ಕಾನೂನಿಗೆ ಗೌರವ ಕೊಟ್ಟು ನೋಟೀಸು ತೆಗೆದುಕೊಂಡಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಪ್ರಕ್ರಿಯೆಯನ್ನು ಪೊಲೀಸರು ಮಾಡಬೇಕು, ಐದು ದಿನ ಕಾಲವಕಾಶವನ್ನು ಕೇಳಿದ್ದಾರೆ. ಶಾಸಕರ ಮೇಲೆ ಪೊಲೀಸರು ಒತ್ತಡ ಹಾಕಿ ಬಂಧಿಸಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.

ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ರಾಜ್ಯದಲ್ಲಿ ಸರಕಾರ ಮಾಡುತ್ತಿದೆ. ಶಾಸಕರನ್ನು ಮಟ್ಟ ಹಾಕಲು ಬಂಧಿಸಲು ಮುಂದಾಗಿದೆ ಉತ್ತರ ಕೊಡುತ್ತೇವೆ. ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ಸರಕಾರ ಮಾಡುತ್ತಿದೆ. ಮಾಡಿದೆ. ಇದು ಸಂವಿಧಾನ ವಿರೋಧಿ ಕೆಲಸ. ಸಿದ್ದರಾಮಯ್ಯ ಮೇಲೆ ಕೇಸು ಆಗಿದೆ ಯಾರೂ ನೋಟಿಸು ನಿಡಿಲ್ಲ,ನನ್ನ ಮೇಲೆ ಮೂರು ಕೇಸು ಇತ್ತು ಯಾರೂ ನೋಟಿಸು ನೀಡಿಲ್ಲ, ನಿರಾಪರಾಧಿಗಳ ಮೇಲೆ ಈ ರೀತಿ ಕೇಸು ಹಾಕುವುದು ಸರಿಯಲ್ಲ, ರಾಜಕೀಯ ಪ್ರೇರಿತವಾಗಿ ಪೊಲೀಸರು ಬಂಧಿಸುವ ಕಾರ್ಯ ಮಾಡಬಾರದು ಎಂದು ತಿಳಿಸಿದರು. .

Related posts

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಓಣಂ ಆಚರಣೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ’ ವಾರ್ಷಿಕ ಪರ್ವ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya
error: Content is protected !!