37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

ಉಜಿರೆ: ಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಮೇ 22 ರಂದು ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಮತ್ತು ಧರ್ಮಸ್ಥಳದ ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಸೇವಾಕರ್ತರ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು.
ಶುದ್ಧವಾದ ಗಾಳಿ, ನೀರು ಮತ್ತು ಪ್ರಶಾಂತ ಪ್ರಾಕೃತಿಕ ಪರಿಸರದಿಂದ ನಾವು ಉತ್ತಮ ಆರೋಗ್ಯಭಾಗ್ಯವನ್ನು ಹೊಂದಬಹುದು. ಸೇವಾಮನೋಭಾವದಿಂದ ಸಂಪಾದಿಸಿದ ಪುಣ್ಯ ಶಾಶ್ವತವಾಗಿರುತ್ತದೆ. ದೇವರಿಗೆ ಪ್ರಿಯವಾದ ಸೇವೆ ಮಾಡುವುದರಿಂದ ಆತ್ಮತೃಪ್ತಿ ಮತ್ತು ಸಂತೋಷ ಸಿಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, “ಶೌರ್ಯ’’ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಸಾರ್ವಜನಿಕರು, ಭಕ್ತರು ಹಾಗೂ ಗ್ರಾಮಸ್ಥರು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!