26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

ಉಜಿರೆ: ಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಮೇ 22 ರಂದು ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಮತ್ತು ಧರ್ಮಸ್ಥಳದ ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಸೇವಾಕರ್ತರ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು.
ಶುದ್ಧವಾದ ಗಾಳಿ, ನೀರು ಮತ್ತು ಪ್ರಶಾಂತ ಪ್ರಾಕೃತಿಕ ಪರಿಸರದಿಂದ ನಾವು ಉತ್ತಮ ಆರೋಗ್ಯಭಾಗ್ಯವನ್ನು ಹೊಂದಬಹುದು. ಸೇವಾಮನೋಭಾವದಿಂದ ಸಂಪಾದಿಸಿದ ಪುಣ್ಯ ಶಾಶ್ವತವಾಗಿರುತ್ತದೆ. ದೇವರಿಗೆ ಪ್ರಿಯವಾದ ಸೇವೆ ಮಾಡುವುದರಿಂದ ಆತ್ಮತೃಪ್ತಿ ಮತ್ತು ಸಂತೋಷ ಸಿಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, “ಶೌರ್ಯ’’ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಸಾರ್ವಜನಿಕರು, ಭಕ್ತರು ಹಾಗೂ ಗ್ರಾಮಸ್ಥರು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

Related posts

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!