26.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತನಗೆ ಹಾಗೂ ತನ್ನ ಮಗನಿಗೆ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಸಾರ್ವಜನಿಕರ ಎದುರಿನಲ್ಲಿ ಅನುಚಿತವಾಗಿ ವರ್ತಿಸಿರುವುದಲ್ಲದೇ, ನನ್ನ ಮಗನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಬಳಂಜ ನಿವಾಸಿ ರತ್ನಾವತಿ ಅವರು ಬಳಂಜ ಪ್ರಕಾಶ್ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.


ಸಂತ್ರಸ್ತ ಮಹಿಳೆ ರತ್ನಾವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ತನ್ನ ಮಗ, ಅಶ್ವಿನ್ ಹಾಗೂ ಬಳಂಜ ನಿವಾಸಿ ಪ್ರಕಾಶ್‌ ಶೆಟ್ಟಿ ಎಂಬಾತನಿಗೂ ಈ ಹಿಂದೆಯೇ ಮನಸ್ತಾಪವಿದ್ದು, ಮೇ 20 ರಂದು ರಾತ್ರಿ, ಬಳೆಂಜ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ, ವಿದ್ಯುತ್ ಸ್ಥಗಿತಗೊಂಡಿದ್ದು, ನನ್ನ ಮಗ ಹಾಗೂ ಮತ್ತೋರ್ವ ಜನರೇಟರ್ ಸ್ಟಾರ್ಟ್ ಮಾಡಲು ಹೋದಾಗ, ಕತ್ತಲಿನಲ್ಲಿ ನನ್ನ ಮಗ ಆಕಸ್ಮಿಕವಾಗಿ ಪ್ರಕಾಶ್ ಶೆಟ್ಟಿಯವರಿಗೆ ತಾಗಿರುತ್ತಾನೆ. ಆಗ ಆರೋಪಿತನು ನನ್ನ ಮಗನಿಗೆ ಅವ್ಯಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದು, ಗಲಾಟೆಯ ಶಬ್ದ ಕೇಳಿ ಸ್ಥಳಕ್ಕೆ ಬಂದ ನನಗೂ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಸಾರ್ವಜನಿಕರ ಎದುರಿನಲ್ಲಿ ಅನುಚಿತವಾಗಿ ವರ್ತಿಸಿರುವುದಲ್ಲದೇ, ಮಗನನ್ನುದ್ದೇಶಿಸಿ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಆರೋಪಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ರತ್ನಾವತಿ ಹಾಗೂ ಹಾಗೂ ಅವರ ಮಗ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿ ನೀಡಿದ ದೂರಿನ ಮೇರೆಗೆ, ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ : 504, 323, 354, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!