25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತನಗೆ ಹಾಗೂ ತನ್ನ ಮಗನಿಗೆ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಸಾರ್ವಜನಿಕರ ಎದುರಿನಲ್ಲಿ ಅನುಚಿತವಾಗಿ ವರ್ತಿಸಿರುವುದಲ್ಲದೇ, ನನ್ನ ಮಗನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಬಳಂಜ ನಿವಾಸಿ ರತ್ನಾವತಿ ಅವರು ಬಳಂಜ ಪ್ರಕಾಶ್ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.


ಸಂತ್ರಸ್ತ ಮಹಿಳೆ ರತ್ನಾವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ತನ್ನ ಮಗ, ಅಶ್ವಿನ್ ಹಾಗೂ ಬಳಂಜ ನಿವಾಸಿ ಪ್ರಕಾಶ್‌ ಶೆಟ್ಟಿ ಎಂಬಾತನಿಗೂ ಈ ಹಿಂದೆಯೇ ಮನಸ್ತಾಪವಿದ್ದು, ಮೇ 20 ರಂದು ರಾತ್ರಿ, ಬಳೆಂಜ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ, ವಿದ್ಯುತ್ ಸ್ಥಗಿತಗೊಂಡಿದ್ದು, ನನ್ನ ಮಗ ಹಾಗೂ ಮತ್ತೋರ್ವ ಜನರೇಟರ್ ಸ್ಟಾರ್ಟ್ ಮಾಡಲು ಹೋದಾಗ, ಕತ್ತಲಿನಲ್ಲಿ ನನ್ನ ಮಗ ಆಕಸ್ಮಿಕವಾಗಿ ಪ್ರಕಾಶ್ ಶೆಟ್ಟಿಯವರಿಗೆ ತಾಗಿರುತ್ತಾನೆ. ಆಗ ಆರೋಪಿತನು ನನ್ನ ಮಗನಿಗೆ ಅವ್ಯಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದು, ಗಲಾಟೆಯ ಶಬ್ದ ಕೇಳಿ ಸ್ಥಳಕ್ಕೆ ಬಂದ ನನಗೂ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಸಾರ್ವಜನಿಕರ ಎದುರಿನಲ್ಲಿ ಅನುಚಿತವಾಗಿ ವರ್ತಿಸಿರುವುದಲ್ಲದೇ, ಮಗನನ್ನುದ್ದೇಶಿಸಿ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಆರೋಪಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ರತ್ನಾವತಿ ಹಾಗೂ ಹಾಗೂ ಅವರ ಮಗ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿ ನೀಡಿದ ದೂರಿನ ಮೇರೆಗೆ, ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ : 504, 323, 354, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya
error: Content is protected !!