24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ತರಬೇತಿ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ವರದಿಗಳನ್ನು ಗಮನಿಸಿ ಹೆಗ್ಗಡೆ ದಂಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ತರಬೇತಿಗಳ ಬಗ್ಗೆ ಮಾರ್ಗದರ್ಶನ ನೀಡಿದರು.


ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ತರಬೇತಿ ಸಂಸ್ಥೆಯು ಕಳೆದ 2023-24 ನೇ ಸಾಲಿನಲ್ಲಿ 5೦52 ಶಿಬಿರಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಸಾಮರ್ಥ್ಯಾಭಿವೃದ್ಧಿ ತರಬೇತಿ, ಕೌಶಲ್ಯಾಭಿವೃದ್ಧಿ ತರಬೇತಿ, ಭಡ್ತಿ ತರಬೇತಿ, ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ತರಬೇತಿ, ಕಂಪ್ಯೂಟರ್ ತರಬೇತಿ, ಟೈಲರಿಂಗ್ ತರಬೇತಿ, ಸಾರಿಗೊಂಡೆ, ಬ್ಲೌಸ್ ಡಿಸೈನ್, ಮೆಹಂದಿ ಡಿಸೈನ್, ಬಟ್ಟೆಚೀಲ ತರಬೇತಿ ಇತ್ಯಾದಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ವರ್ಷ ದ.ಕ. ಜಿಲ್ಲಾ ಪಂಚಾಯತ್‌ ವತಿಯಿಂದ ಸರ್ಕಾರದ ನೂತನ ಯೋಜನೆ ‘ಕೂಸಿನ ಮನೆ’ ಈ ತರಬೇತಿಯನ್ನು ನಡೆಸಲಾಗಿದ್ದು, ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ.ಆನಂದ್, ಬೆಳ್ತಂಗಡಿ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ರವರು ಭೇಟಿ ತರಬೇತಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಪ್ರಸಕ್ತ ವರ್ಷ ಇನ್ನೂ ಹೆಚ್ಚಿನ ತರಬೇತಿಯನ್ನು ನಡೆಸುವ ಗುರಿಯನ್ನು ತರಬೇತಿ ಸಂಸ್ಥೆಯು ಹೊಂದಿದೆ.

Related posts

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!