23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ಗೌರವ ಕೊಟ್ಟು ಪೊಲೀಸರು ಕೊಟ್ಟ ನೋಟೀಸನ್ನು ತೆಗೆದುಕೊಂಡಿದ್ದು ಅದಕ್ಕೆ ಐದು ದಿನಗಳ ಕಾಲವಕಾಶವನ್ನು ಕೇಳಿ ಉತ್ತರವನ್ನು ಕೊಟ್ಟಿದ್ದಾರೆ. ಇದನ್ನು ಮೀರಿ ಪೊಲೀಸರು ಅವರನ್ನು ಬಂಧಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ ನೀಡಿದ ಸಂಸದ ಕಟೀಲ್ ಅವರು ಮಾತನಾಡಿ, ಶಾಸಕರು ಕಾನೂನಿಗೆ ಗೌರವ ಕೊಟ್ಟು ನೋಟೀಸು ತೆಗೆದುಕೊಂಡಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಪ್ರಕ್ರಿಯೆಯನ್ನು ಪೊಲೀಸರು ಮಾಡಬೇಕು, ಐದು ದಿನ ಕಾಲವಕಾಶವನ್ನು ಕೇಳಿದ್ದಾರೆ. ಶಾಸಕರ ಮೇಲೆ ಪೊಲೀಸರು ಒತ್ತಡ ಹಾಕಿ ಬಂಧಿಸಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.

ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ರಾಜ್ಯದಲ್ಲಿ ಸರಕಾರ ಮಾಡುತ್ತಿದೆ. ಶಾಸಕರನ್ನು ಮಟ್ಟ ಹಾಕಲು ಬಂಧಿಸಲು ಮುಂದಾಗಿದೆ ಉತ್ತರ ಕೊಡುತ್ತೇವೆ. ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ಸರಕಾರ ಮಾಡುತ್ತಿದೆ. ಮಾಡಿದೆ. ಇದು ಸಂವಿಧಾನ ವಿರೋಧಿ ಕೆಲಸ. ಸಿದ್ದರಾಮಯ್ಯ ಮೇಲೆ ಕೇಸು ಆಗಿದೆ ಯಾರೂ ನೋಟಿಸು ನಿಡಿಲ್ಲ,ನನ್ನ ಮೇಲೆ ಮೂರು ಕೇಸು ಇತ್ತು ಯಾರೂ ನೋಟಿಸು ನೀಡಿಲ್ಲ, ನಿರಾಪರಾಧಿಗಳ ಮೇಲೆ ಈ ರೀತಿ ಕೇಸು ಹಾಕುವುದು ಸರಿಯಲ್ಲ, ರಾಜಕೀಯ ಪ್ರೇರಿತವಾಗಿ ಪೊಲೀಸರು ಬಂಧಿಸುವ ಕಾರ್ಯ ಮಾಡಬಾರದು ಎಂದು ತಿಳಿಸಿದರು. .

Related posts

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya
error: Content is protected !!