25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ಗೌರವ ಕೊಟ್ಟು ಪೊಲೀಸರು ಕೊಟ್ಟ ನೋಟೀಸನ್ನು ತೆಗೆದುಕೊಂಡಿದ್ದು ಅದಕ್ಕೆ ಐದು ದಿನಗಳ ಕಾಲವಕಾಶವನ್ನು ಕೇಳಿ ಉತ್ತರವನ್ನು ಕೊಟ್ಟಿದ್ದಾರೆ. ಇದನ್ನು ಮೀರಿ ಪೊಲೀಸರು ಅವರನ್ನು ಬಂಧಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ ನೀಡಿದ ಸಂಸದ ಕಟೀಲ್ ಅವರು ಮಾತನಾಡಿ, ಶಾಸಕರು ಕಾನೂನಿಗೆ ಗೌರವ ಕೊಟ್ಟು ನೋಟೀಸು ತೆಗೆದುಕೊಂಡಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಪ್ರಕ್ರಿಯೆಯನ್ನು ಪೊಲೀಸರು ಮಾಡಬೇಕು, ಐದು ದಿನ ಕಾಲವಕಾಶವನ್ನು ಕೇಳಿದ್ದಾರೆ. ಶಾಸಕರ ಮೇಲೆ ಪೊಲೀಸರು ಒತ್ತಡ ಹಾಕಿ ಬಂಧಿಸಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.

ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ರಾಜ್ಯದಲ್ಲಿ ಸರಕಾರ ಮಾಡುತ್ತಿದೆ. ಶಾಸಕರನ್ನು ಮಟ್ಟ ಹಾಕಲು ಬಂಧಿಸಲು ಮುಂದಾಗಿದೆ ಉತ್ತರ ಕೊಡುತ್ತೇವೆ. ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ಸರಕಾರ ಮಾಡುತ್ತಿದೆ. ಮಾಡಿದೆ. ಇದು ಸಂವಿಧಾನ ವಿರೋಧಿ ಕೆಲಸ. ಸಿದ್ದರಾಮಯ್ಯ ಮೇಲೆ ಕೇಸು ಆಗಿದೆ ಯಾರೂ ನೋಟಿಸು ನಿಡಿಲ್ಲ,ನನ್ನ ಮೇಲೆ ಮೂರು ಕೇಸು ಇತ್ತು ಯಾರೂ ನೋಟಿಸು ನೀಡಿಲ್ಲ, ನಿರಾಪರಾಧಿಗಳ ಮೇಲೆ ಈ ರೀತಿ ಕೇಸು ಹಾಕುವುದು ಸರಿಯಲ್ಲ, ರಾಜಕೀಯ ಪ್ರೇರಿತವಾಗಿ ಪೊಲೀಸರು ಬಂಧಿಸುವ ಕಾರ್ಯ ಮಾಡಬಾರದು ಎಂದು ತಿಳಿಸಿದರು. .

Related posts

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya
error: Content is protected !!