ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ
ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದ ಹಿನ್ನೆಲೆಯಲ್ಲಿ ಮೇ 22ರಂದು ಬೆಳಿಗ್ಗೆ ಪೊಲೀಸರು ಅವರ ಮನೆಗೆ ಬಂಧನಕ್ಕೆ ಹೋಗಿದ್ದು, ಭಾರಿ ಸಂಖ್ಯೆಯಲ್ಲಿ ಕಾಯ೯ಕತ೯ರು ಸೇರಿ ವಿರೋಧ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಮುಂದುವರಿದಿದೆ.


ಮೇಲಂತಬೆಟ್ಟು ಗ್ರಾಮದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಶಿರಾಜ್ ಅವರನ್ನು ಪೊಲೀಸರು ಅವರನ್ನು ರಾತ್ರಿ ಸಮಯ ಬಂಧಿಸಿರುವುದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಅವರು ತಡ ರಾತ್ರಿ ಬೆಳ್ತಂಗಡಿ ಠಾಣೆಯಲ್ಲಿ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ನಡೆಸಿದ್ದರು.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರೆಂದು ಶಾಸಕ ಹರೀಶ್ ಪೂಂಜರ‌ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
‌ ಅಮಾಯಕ ಶಶಿರಾಜ್ ಶೆಟ್ಟಿ ಬಂಧನ ಹಾಗೂ ಶಾಸಕರ ಮೇಲೆ ಹಾಕಿದ ಕೇಸ್ ಹಿಂಪಡೆಯಲು ಮೇ 20ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆಗೆ ಹಾಗೂ ಬೆಳ್ತಂಗಡಿ ಠಾಣಾ ಪೊಲೀಸ್‌ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್‌ ಠಾಣೆಗೆ ಆದಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.


ಶಾಸಕ ಹರೀಶ್ ಪೂಂಜರ‌ ಮೇಲೆ ಎರಡು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ಮೇ 22ರಂದು ಶಾಸಕರ ಮನೆಗೆ ತೆರಳಿ ಮನೆಯಲ್ಲಿ ಇದ್ದ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಮುಂದಾದರು ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾಯ೯ಕತ೯ರು ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದರು.


ಬಂಧನಕ್ಕೆ ಮೊದಲು ಆರೋಪಿಗೆ ನೋಟಿಸ್ ನೀಡಬೇಕು. ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಲಾಗಿದೆ. ಕೇಸ್ ಹಾಕಿದ ಎಫ್.ಐ.ಆರ್‌ ಸಿಕ್ಕಿಲ್ಲ, ಒಂದು ಕೇಸಿಗೆ ನೋಟೀಸ್ ಕೊಟ್ಟಿದ್ದಾರೆ, ಇನ್ನೊಂದಕ್ಕೆ ಕೊಟ್ಟಿಲ್ಲ, ನೋಟಿಸ್ ಕೊಡದೆ ಬಂಧಿಸುವ ಹಾಗಿಲ್ಲ , ಶಾಸಕರು ಕಾನೂನಿನ ಗೌರವ ಕೊಡುತ್ತಾರೆ ಎಂದು ಶಾಸಕರ ಪರ ವಕೀಲರು ವಾದಿಸಿದರು. ಪೊಲೀಸ್ ಅಧಿಕಾರಿಗಳ ಹಾಗೂ ಶಾಸಕರ ಬೆಂಬಲಿಗರ ನಡುವೆ ವಾದ -ಪ್ರತಿವಾದ ಮುಂದುವರಿದೆ.

Leave a Comment

error: Content is protected !!