July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

ಬೆಳ್ತಂಗಡಿ: ಮೇಲಂತಬೆಟ್ಟು ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ
ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದ ಹಿನ್ನೆಲೆಯಲ್ಲಿ ಮೇ 22ರಂದು ಬೆಳಿಗ್ಗೆ ಪೊಲೀಸರು ಅವರ ಮನೆಗೆ ಬಂಧನಕ್ಕೆ ಹೋಗಿದ್ದು, ಭಾರಿ ಸಂಖ್ಯೆಯಲ್ಲಿ ಕಾಯ೯ಕತ೯ರು ಸೇರಿ ವಿರೋಧ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಮುಂದುವರಿದಿದೆ.


ಮೇಲಂತಬೆಟ್ಟು ಗ್ರಾಮದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಶಿರಾಜ್ ಅವರನ್ನು ಪೊಲೀಸರು ಅವರನ್ನು ರಾತ್ರಿ ಸಮಯ ಬಂಧಿಸಿರುವುದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಅವರು ತಡ ರಾತ್ರಿ ಬೆಳ್ತಂಗಡಿ ಠಾಣೆಯಲ್ಲಿ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ನಡೆಸಿದ್ದರು.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರೆಂದು ಶಾಸಕ ಹರೀಶ್ ಪೂಂಜರ‌ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
‌ ಅಮಾಯಕ ಶಶಿರಾಜ್ ಶೆಟ್ಟಿ ಬಂಧನ ಹಾಗೂ ಶಾಸಕರ ಮೇಲೆ ಹಾಕಿದ ಕೇಸ್ ಹಿಂಪಡೆಯಲು ಮೇ 20ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆಗೆ ಹಾಗೂ ಬೆಳ್ತಂಗಡಿ ಠಾಣಾ ಪೊಲೀಸ್‌ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್‌ ಠಾಣೆಗೆ ಆದಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.


ಶಾಸಕ ಹರೀಶ್ ಪೂಂಜರ‌ ಮೇಲೆ ಎರಡು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ಮೇ 22ರಂದು ಶಾಸಕರ ಮನೆಗೆ ತೆರಳಿ ಮನೆಯಲ್ಲಿ ಇದ್ದ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಮುಂದಾದರು ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾಯ೯ಕತ೯ರು ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದರು.


ಬಂಧನಕ್ಕೆ ಮೊದಲು ಆರೋಪಿಗೆ ನೋಟಿಸ್ ನೀಡಬೇಕು. ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಲಾಗಿದೆ. ಕೇಸ್ ಹಾಕಿದ ಎಫ್.ಐ.ಆರ್‌ ಸಿಕ್ಕಿಲ್ಲ, ಒಂದು ಕೇಸಿಗೆ ನೋಟೀಸ್ ಕೊಟ್ಟಿದ್ದಾರೆ, ಇನ್ನೊಂದಕ್ಕೆ ಕೊಟ್ಟಿಲ್ಲ, ನೋಟಿಸ್ ಕೊಡದೆ ಬಂಧಿಸುವ ಹಾಗಿಲ್ಲ , ಶಾಸಕರು ಕಾನೂನಿನ ಗೌರವ ಕೊಡುತ್ತಾರೆ ಎಂದು ಶಾಸಕರ ಪರ ವಕೀಲರು ವಾದಿಸಿದರು. ಪೊಲೀಸ್ ಅಧಿಕಾರಿಗಳ ಹಾಗೂ ಶಾಸಕರ ಬೆಂಬಲಿಗರ ನಡುವೆ ವಾದ -ಪ್ರತಿವಾದ ಮುಂದುವರಿದೆ.

Related posts

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!