32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಾಸಕ ಹರೀಶ್ ಪೂಂಜ ಅವರ ಮೇಲೆ ವಿನಾಕಾರಣ ಕೇಸು ದಾಖಲಿಸಿ, ಅವರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿ ಮುಂದೆ ಆಗುವ ಯಾವುದೇ ವಿಚಾರಗಳಿಗೆ ಪೊಲೀಸರು ಹಾಗೂ ಸರಕಾರ ನೇರ ಹೊಣೆಯಾಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಅಕ್ರಮ ಪ್ರಕರಣವೊಂದರಲ್ಲಿ ಶಾಸಕ ಹರೀಶ್ ಪೂಂಜರ ಮೇಲೆ ಕೇಸು ಹಾಕಿ ಅವರನ್ನು ಬಂಧನ ಮಾಡಲು ಪೊಲೀಸರು ಹೋಗಿರುವುದು ಖಂಡನೀಯ, ಅಕ್ರಮ ಮಾಡಿದವನ ಮೇಲೆ ಕಾನೂನು ಕ್ರಮ ಕೈಗೊಳ್ಳಲಿ, ಅವರ ಮೇಲೆ ಕಠಿಣ ಕ್ರಮ ಆಗಲಿ. ಆದರೆ ಈ ಪ್ರಕರಣದಲ್ಲಿ ನಮ್ಮ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಅವರನ್ನು ಕೇಸಿನಲ್ಲಿ ಸೇರಿಸಿ, ರಾತ್ರೋರಾತ್ರಿ ಅವರನ್ನು ಬಂಧಿಸಿ, ಪಿತೂರಿ ಮಾಡಿರುವುದನ್ನು ಹರೀಶ್ ಪೂಂಜ ಅವರು ಠಾಣೆಗೆ ಹೋಗಿ ಪ್ರಶ್ನಿಸಿರುವುದಕ್ಕೆ ಅವರ ಮೇಲೆ ಕೇಸು ಹಾಕಲಾಗಿದೆ. ಕಾರ್ಯಕರ್ತರಿಗೆ ಅನ್ಯಾಯವಾದಾಗ, ಅವರ ಮೇಲೆ ದಬ್ಬಾಳಿಕೆ ಮಾಡಿದಾಗ ಅದರ ವಿರುದ್ಧ ಪ್ರತಿಭಟನೆ ಮಾಡಿ, ಶಾಸಕರು ಉದ್ವೇಗದಿಂದ ಮಾತನಾಡಿದ್ದಾರೆ. ಅದು ಸರಿ ಅಲ್ಲ ಎಂದು ಅವರಿಗೂ ಅನಿಸಿದೆ. ಕಾರ್ಯಕರ್ತರ ಮೇಲೆ ರಾಜ್ಯದಾದ್ಯಂತ ದಬ್ಬಾಳಿಕೆಗಳು ಆಗುತ್ತಿದೆ. ಶಾಸಕರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ನಡೆಯುವ ವಿಚಾರಗಳಿಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ನೇರ ಹೊಣೆಯಾಗಬೇಕಾಗುತ್ತದೆ. ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಮಾಡಿದವರು ಮೇಲೆ ಕ್ರಮ ಕೈಗೊಳ್ಳಲು ಸರಕಾರ ಹಿಂದೆ ಮುಂದೆ ನೋಡುತ್ತಿದೆ. ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಸಹಿಸುವುದಿಲ್ಲ, ಶಾಸಕರ ಬಂಧನ ಒಳ್ಳೆಯ ಸಂದೇಶ ನೀಡುವುದಿಲ್ಲ, ಗೃಹ ಸಚಿವರು ಸಂಬಂಧಪಟ್ಟ ಪೊಲೀಸ್ ವರಿಷ್ಠಾಧಿಕಾರಿಗಳ ಮಾತನಾಡಿ ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya
error: Content is protected !!