24 C
ಪುತ್ತೂರು, ಬೆಳ್ತಂಗಡಿ
June 8, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಾಸಕ ಹರೀಶ್ ಪೂಂಜ ಅವರ ಮೇಲೆ ವಿನಾಕಾರಣ ಕೇಸು ದಾಖಲಿಸಿ, ಅವರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿ ಮುಂದೆ ಆಗುವ ಯಾವುದೇ ವಿಚಾರಗಳಿಗೆ ಪೊಲೀಸರು ಹಾಗೂ ಸರಕಾರ ನೇರ ಹೊಣೆಯಾಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಅಕ್ರಮ ಪ್ರಕರಣವೊಂದರಲ್ಲಿ ಶಾಸಕ ಹರೀಶ್ ಪೂಂಜರ ಮೇಲೆ ಕೇಸು ಹಾಕಿ ಅವರನ್ನು ಬಂಧನ ಮಾಡಲು ಪೊಲೀಸರು ಹೋಗಿರುವುದು ಖಂಡನೀಯ, ಅಕ್ರಮ ಮಾಡಿದವನ ಮೇಲೆ ಕಾನೂನು ಕ್ರಮ ಕೈಗೊಳ್ಳಲಿ, ಅವರ ಮೇಲೆ ಕಠಿಣ ಕ್ರಮ ಆಗಲಿ. ಆದರೆ ಈ ಪ್ರಕರಣದಲ್ಲಿ ನಮ್ಮ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಅವರನ್ನು ಕೇಸಿನಲ್ಲಿ ಸೇರಿಸಿ, ರಾತ್ರೋರಾತ್ರಿ ಅವರನ್ನು ಬಂಧಿಸಿ, ಪಿತೂರಿ ಮಾಡಿರುವುದನ್ನು ಹರೀಶ್ ಪೂಂಜ ಅವರು ಠಾಣೆಗೆ ಹೋಗಿ ಪ್ರಶ್ನಿಸಿರುವುದಕ್ಕೆ ಅವರ ಮೇಲೆ ಕೇಸು ಹಾಕಲಾಗಿದೆ. ಕಾರ್ಯಕರ್ತರಿಗೆ ಅನ್ಯಾಯವಾದಾಗ, ಅವರ ಮೇಲೆ ದಬ್ಬಾಳಿಕೆ ಮಾಡಿದಾಗ ಅದರ ವಿರುದ್ಧ ಪ್ರತಿಭಟನೆ ಮಾಡಿ, ಶಾಸಕರು ಉದ್ವೇಗದಿಂದ ಮಾತನಾಡಿದ್ದಾರೆ. ಅದು ಸರಿ ಅಲ್ಲ ಎಂದು ಅವರಿಗೂ ಅನಿಸಿದೆ. ಕಾರ್ಯಕರ್ತರ ಮೇಲೆ ರಾಜ್ಯದಾದ್ಯಂತ ದಬ್ಬಾಳಿಕೆಗಳು ಆಗುತ್ತಿದೆ. ಶಾಸಕರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ನಡೆಯುವ ವಿಚಾರಗಳಿಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ನೇರ ಹೊಣೆಯಾಗಬೇಕಾಗುತ್ತದೆ. ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಮಾಡಿದವರು ಮೇಲೆ ಕ್ರಮ ಕೈಗೊಳ್ಳಲು ಸರಕಾರ ಹಿಂದೆ ಮುಂದೆ ನೋಡುತ್ತಿದೆ. ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಸಹಿಸುವುದಿಲ್ಲ, ಶಾಸಕರ ಬಂಧನ ಒಳ್ಳೆಯ ಸಂದೇಶ ನೀಡುವುದಿಲ್ಲ, ಗೃಹ ಸಚಿವರು ಸಂಬಂಧಪಟ್ಟ ಪೊಲೀಸ್ ವರಿಷ್ಠಾಧಿಕಾರಿಗಳ ಮಾತನಾಡಿ ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು.

Related posts

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya
error: Content is protected !!