“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ಮಹಿಳಾ ಜೆಸಿ ಮತ್ತು ಜೆಜೆಸಿಯ ಸಹಕಾರದಿಂದ ಹಾಗೂ ತಾಲೂಕಿನ ಇತರ ಸಂಘ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಫೆಬ್ರವರಿಯಲ್ಲಿ ಬೆಳ್ತಂಗಡಿಯ ಅಯ್ಯಪ್ಪ ಗುಡಿಯಿಂದ ಜೆಸಿ ಭವನದವರೆಗೆ ನಡೆದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ
ಜೆಸಿಐ ಭಾರತವು ವಲಯ 15ರಲ್ಲಿ ಬೆಳ್ತಂಗಡಿ ಘಟಕಕ್ಕೆ Top Performer” ಎಂಬ ಮನ್ನಣೆಯನ್ನು ನೀಡಿ ಗೌರವಿಸಿದೆ.

ಜೆಸಿಐ ಬೆಳ್ತಂಗಡಿಯು ಹಮ್ಮಿಕೊಂಡ ಈ ಸಮಾಜಮುಖಿ ಮತ್ತು ಮಹತ್ವವುಳ್ಳ ಕಾರ್ಯಕ್ರಮವನ್ನು ಗುರುತಿಸಿ ಮನ್ನಣೆ ನೀಡಿದೆ.
ಜೆಸಿಐ ಭಾರತದ ವಲಯ 15 ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ.

Leave a Comment

error: Content is protected !!