23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

ಬೆಳ್ತಂಗಡಿ : ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನೆಲೆ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಇಂದು ಅವರ ಗರ್ಡಾಡಿಯ ನಿವಾಸಕ್ಕೆ ಆಗಮಿಸಿದ್ದಾರೆ.

ಎರಡು ಪ್ರಕರಣಗಳಲ್ಲಿ ಒಂದು ಪೊಲೀಸ್‌ ಠಾಣೆಗೆ ಅಕ್ರಮ ಪ್ರವೇಶ ಮಾಡಿ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಹಾಗೂ ಇನ್ನೊಂದು ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪ್ರಕರಣ ದಾಖಲಾಗಿದೆ.

ಪೊಲೀಸರು ಬಂಧನಕ್ಕೆ ಬಂದ ವಿಷಯ ತಿಳಿಯುತ್ತಲೇ ಹಲವಾರು ಕಾರ್ಯಕರ್ತ ಹರೀಶ್ ಪೂಂಜ ನಿವಾಸಕ್ಕೆ ಆಗಮಿಸಿದ್ದು, ಸರಕಾರದ ವಿರುದ್ಧ ಹಾಗೂ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya
error: Content is protected !!