September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ತರಬೇತಿ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ವರದಿಗಳನ್ನು ಗಮನಿಸಿ ಹೆಗ್ಗಡೆ ದಂಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ತರಬೇತಿಗಳ ಬಗ್ಗೆ ಮಾರ್ಗದರ್ಶನ ನೀಡಿದರು.


ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ತರಬೇತಿ ಸಂಸ್ಥೆಯು ಕಳೆದ 2023-24 ನೇ ಸಾಲಿನಲ್ಲಿ 5೦52 ಶಿಬಿರಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಸಾಮರ್ಥ್ಯಾಭಿವೃದ್ಧಿ ತರಬೇತಿ, ಕೌಶಲ್ಯಾಭಿವೃದ್ಧಿ ತರಬೇತಿ, ಭಡ್ತಿ ತರಬೇತಿ, ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ತರಬೇತಿ, ಕಂಪ್ಯೂಟರ್ ತರಬೇತಿ, ಟೈಲರಿಂಗ್ ತರಬೇತಿ, ಸಾರಿಗೊಂಡೆ, ಬ್ಲೌಸ್ ಡಿಸೈನ್, ಮೆಹಂದಿ ಡಿಸೈನ್, ಬಟ್ಟೆಚೀಲ ತರಬೇತಿ ಇತ್ಯಾದಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ವರ್ಷ ದ.ಕ. ಜಿಲ್ಲಾ ಪಂಚಾಯತ್‌ ವತಿಯಿಂದ ಸರ್ಕಾರದ ನೂತನ ಯೋಜನೆ ‘ಕೂಸಿನ ಮನೆ’ ಈ ತರಬೇತಿಯನ್ನು ನಡೆಸಲಾಗಿದ್ದು, ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ.ಆನಂದ್, ಬೆಳ್ತಂಗಡಿ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ರವರು ಭೇಟಿ ತರಬೇತಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಪ್ರಸಕ್ತ ವರ್ಷ ಇನ್ನೂ ಹೆಚ್ಚಿನ ತರಬೇತಿಯನ್ನು ನಡೆಸುವ ಗುರಿಯನ್ನು ತರಬೇತಿ ಸಂಸ್ಥೆಯು ಹೊಂದಿದೆ.

Related posts

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!