September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ಗೌರವ ಕೊಟ್ಟು ಪೊಲೀಸರು ಕೊಟ್ಟ ನೋಟೀಸನ್ನು ತೆಗೆದುಕೊಂಡಿದ್ದು ಅದಕ್ಕೆ ಐದು ದಿನಗಳ ಕಾಲವಕಾಶವನ್ನು ಕೇಳಿ ಉತ್ತರವನ್ನು ಕೊಟ್ಟಿದ್ದಾರೆ. ಇದನ್ನು ಮೀರಿ ಪೊಲೀಸರು ಅವರನ್ನು ಬಂಧಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ ನೀಡಿದ ಸಂಸದ ಕಟೀಲ್ ಅವರು ಮಾತನಾಡಿ, ಶಾಸಕರು ಕಾನೂನಿಗೆ ಗೌರವ ಕೊಟ್ಟು ನೋಟೀಸು ತೆಗೆದುಕೊಂಡಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಪ್ರಕ್ರಿಯೆಯನ್ನು ಪೊಲೀಸರು ಮಾಡಬೇಕು, ಐದು ದಿನ ಕಾಲವಕಾಶವನ್ನು ಕೇಳಿದ್ದಾರೆ. ಶಾಸಕರ ಮೇಲೆ ಪೊಲೀಸರು ಒತ್ತಡ ಹಾಕಿ ಬಂಧಿಸಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.

ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ರಾಜ್ಯದಲ್ಲಿ ಸರಕಾರ ಮಾಡುತ್ತಿದೆ. ಶಾಸಕರನ್ನು ಮಟ್ಟ ಹಾಕಲು ಬಂಧಿಸಲು ಮುಂದಾಗಿದೆ ಉತ್ತರ ಕೊಡುತ್ತೇವೆ. ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ಸರಕಾರ ಮಾಡುತ್ತಿದೆ. ಮಾಡಿದೆ. ಇದು ಸಂವಿಧಾನ ವಿರೋಧಿ ಕೆಲಸ. ಸಿದ್ದರಾಮಯ್ಯ ಮೇಲೆ ಕೇಸು ಆಗಿದೆ ಯಾರೂ ನೋಟಿಸು ನಿಡಿಲ್ಲ,ನನ್ನ ಮೇಲೆ ಮೂರು ಕೇಸು ಇತ್ತು ಯಾರೂ ನೋಟಿಸು ನೀಡಿಲ್ಲ, ನಿರಾಪರಾಧಿಗಳ ಮೇಲೆ ಈ ರೀತಿ ಕೇಸು ಹಾಕುವುದು ಸರಿಯಲ್ಲ, ರಾಜಕೀಯ ಪ್ರೇರಿತವಾಗಿ ಪೊಲೀಸರು ಬಂಧಿಸುವ ಕಾರ್ಯ ಮಾಡಬಾರದು ಎಂದು ತಿಳಿಸಿದರು. .

Related posts

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya
error: Content is protected !!