July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ಗೌರವ ಕೊಟ್ಟು ಪೊಲೀಸರು ಕೊಟ್ಟ ನೋಟೀಸನ್ನು ತೆಗೆದುಕೊಂಡಿದ್ದು ಅದಕ್ಕೆ ಐದು ದಿನಗಳ ಕಾಲವಕಾಶವನ್ನು ಕೇಳಿ ಉತ್ತರವನ್ನು ಕೊಟ್ಟಿದ್ದಾರೆ. ಇದನ್ನು ಮೀರಿ ಪೊಲೀಸರು ಅವರನ್ನು ಬಂಧಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ ನೀಡಿದ ಸಂಸದ ಕಟೀಲ್ ಅವರು ಮಾತನಾಡಿ, ಶಾಸಕರು ಕಾನೂನಿಗೆ ಗೌರವ ಕೊಟ್ಟು ನೋಟೀಸು ತೆಗೆದುಕೊಂಡಿದ್ದಾರೆ. ಕಾನೂನಿಗೆ ಗೌರವ ಕೊಟ್ಟು ಪ್ರಕ್ರಿಯೆಯನ್ನು ಪೊಲೀಸರು ಮಾಡಬೇಕು, ಐದು ದಿನ ಕಾಲವಕಾಶವನ್ನು ಕೇಳಿದ್ದಾರೆ. ಶಾಸಕರ ಮೇಲೆ ಪೊಲೀಸರು ಒತ್ತಡ ಹಾಕಿ ಬಂಧಿಸಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.

ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ರಾಜ್ಯದಲ್ಲಿ ಸರಕಾರ ಮಾಡುತ್ತಿದೆ. ಶಾಸಕರನ್ನು ಮಟ್ಟ ಹಾಕಲು ಬಂಧಿಸಲು ಮುಂದಾಗಿದೆ ಉತ್ತರ ಕೊಡುತ್ತೇವೆ. ಜನಪ್ರತಿನಿಧಿಗಳ ಮೇಲೆ ಕೇಸು ಹಾಕುವ ದ್ವೇಷದ ರಾಜಕಾರಣ ಸರಕಾರ ಮಾಡುತ್ತಿದೆ. ಮಾಡಿದೆ. ಇದು ಸಂವಿಧಾನ ವಿರೋಧಿ ಕೆಲಸ. ಸಿದ್ದರಾಮಯ್ಯ ಮೇಲೆ ಕೇಸು ಆಗಿದೆ ಯಾರೂ ನೋಟಿಸು ನಿಡಿಲ್ಲ,ನನ್ನ ಮೇಲೆ ಮೂರು ಕೇಸು ಇತ್ತು ಯಾರೂ ನೋಟಿಸು ನೀಡಿಲ್ಲ, ನಿರಾಪರಾಧಿಗಳ ಮೇಲೆ ಈ ರೀತಿ ಕೇಸು ಹಾಕುವುದು ಸರಿಯಲ್ಲ, ರಾಜಕೀಯ ಪ್ರೇರಿತವಾಗಿ ಪೊಲೀಸರು ಬಂಧಿಸುವ ಕಾರ್ಯ ಮಾಡಬಾರದು ಎಂದು ತಿಳಿಸಿದರು. .

Related posts

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!