July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

ಉಜಿರೆ: ಸ್ಪಷ್ಟಗುರಿ ಮತ್ತು ಕೌಶಲ್ಯಯುತ ಹೆಜ್ಜೆಗಳ ಮೂಲಕ ಯಶಸ್ವಿ ಉದ್ಯಮಿಯಾಗಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕಾರ್ಯನಿರ್ವಹಣಾ ನಿರ್ದೇಶಕ ಕೆ.ಎನ್.ಜನಾರ್ಧನ ಹೇಳಿದರು.

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಎಂಟರ್ಪ್ರೆನ್ಶಿಪ್ ಡೆವಲಪ್ಮೆಂಟ್ ಸೆಲ್ ಸಹಯೋಗದಲ್ಲಿ ಆಯೋಜಿದ್ದ ಉದ್ಯಮಶೀಲತೆಯ ಅಭಿವೃದ್ಧಿ ಕುರಿತಾದ ಎರಡು ದಿನಗಳ ಕಾರ್ಯಗಾರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.ಕೇವಲ ಶಿಕ್ಷಣವೊಂದರಿದ ಬೆಳವಣಿಗೆಯ ಮಾನದಂಡವನ್ನು ನಿರ್ಧರಿಸಲಾಗುವುದಿಲ್ಲ. ನಿರಂತರವಾದ ಸಣ್ಣ ಪ್ರಯತ್ನ ಮತ್ತು ಯೋಜನೆಗಳಿಂದ ಬೃಹತ್ ಉದ್ಯಮಗಳನ್ನು ಸ್ಥಾಪಿಸಿ ಯಶಸ್ವಿಯಾಗಬಹುದು. ನಾನು ಏನು ಮಾಡಬೇಕು ಎನ್ನುವ ಸ್ಪಷ್ಟ ಗುರಿ ವಿದ್ಯಾರ್ಥಿ ದೆಸೆಯಲ್ಲಿಯೇ ಇರಬೇಕು. ಸಾಧನೆಯ ಬಯಕೆಯಿದ್ದರೆ ಸಾಲದು, ಅದನ್ನು ತಲುಪುವಲ್ಲಿ ತೀವ್ರ ಪ್ರಯತ್ನವನ್ನು ಪಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.ಉದ್ಯೋಗಕ್ಕಾಗಿ ಸರ್ಕಾರಗಳನ್ನು ಅವಲಂಬಿಸದೇ ಯುವ ಜನತೆ ಉದ್ಯಮಿಗಳಾಗಿ ಭವಿಷ್ಯವನ್ನು ಕಂಡುಕೊಳ್ಳಬೇಕು. ತಮ್ಮ ಸಾಮರ್ಥ್ಯದ ಬಗ್ಗೆ ಆತ್ಮವಿಶ್ವಾಸ ಬೆಳೆಸಿಕೊಂಡು ದೇಶದ ಅಭಿವೃದ್ಧಿಯ ಜವಾಬ್ದಾರಿಯನ್ನು ಯುವ ಸಮುದಾಯ ತೆಗೆದುಕೊಳ್ಳಬೇಕು. ಅದಕ್ಕಾಗಿ ಸಮಯ ಪ್ರಜ್ಞೆ, ಶಿಸ್ತು, ಬದ್ಧತೆ, ಆರೋಗ್ಯ ಪ್ರಜ್ಞೆಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ತಕ್ಷಣದ ಸಂತೃಪ್ತಿಯಿಂದ ದೂರದ ಗುರಿಗಳನ್ನು ಮರೆಯಬಾರದು. ವ್ಯವಹಾರವನ್ನು ಕಲಿತು, ಬದಲಾವಣೆಗಳಿಗೆ ಒಗ್ಗಿಕೊಂಡು ಹೊಸತನವನ್ನು ಮೈಗೂಡಿಸಿಕೊಂಡು ಮುಂದುವರೆಯಿರಿ ಎಂದು ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲ ಡಾ.ಬಿ.ಎ. ಕುಮಾರ ಹೆಗ್ಡೆ ಮಾತನಾಡಿದರು. ವಿಷಯ ಸ್ಪಷ್ಟತೆ, ಭಾವನಾತ್ಮಕವಾಗಿ ಗಟ್ಟಿಯಾಗಿರುವುದು ಮತ್ತು ಉತ್ತಮ ಸಾಮಾಜಿಕ ಪ್ರಜ್ಞೆಯಿಂದಾಗಿ ವೃತ್ತಿ ಸ್ಥಳಗಳಲ್ಲಿ ಯಶಸ್ವಿಯಾಗಬಹುದು. ಉದ್ಯಮಗಳನ್ನು ಸ್ಥಾಪಿಸಲು ಬ್ಯಾಂಕ್ ಗಳಿಂದ ಸಾಲ ಸೌಲಭ್ಯಗಳಿವೆ. ರುಡ್ ಸೆಟ್ ಸಂಸ್ಥೆ ಸ್ವ ಉದ್ಯೋಗಕ್ಕೆ ತರಬೇತಿ ನೀಡುತ್ತಿದೆ. ಭವಿಷ್ಯದಲ್ಲಿ ಇವುಗಳ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ. ಪಿ, ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮುಖ್ಯಸ್ಥೆ ಡಾ.ಪ್ರಿಯಾಕುಮಾರಿ ಎಸ್.ವಿ, ಎಂಟರ್ಪ್ರೆನ್ಶಿಪ್ ಡೆವಲಪ್ಮೆಂಟ್ ಸೆಲ್ ನ ಸಂಯೋಜಕಿ ಸ್ವಾತಿ. ಬಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರಾವ್ಯ ನಿರೂಪಿಸಿದರು. ಪ್ರಾಧ್ಯಾಪಕಿ ಮಮತಾ. ಕೆ ಸ್ವಾಗತಿಸಿದರು. ಮನೋಜ್ ವಂದಿಸಿದರು.

Related posts

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya
error: Content is protected !!