ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ 597 ಅಂಕಗಳ ಮೂಲಕ ರಾಜ್ಯ ಕ್ಕೆ ಎರಡನೆಯ ಸ್ಥಾನ ಪಡೆದ ಧನ್ವಿ ಭಟ್ ಹಾಗೂ 595 ಅಂಕಗಳ ಮೂಲಕ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಇವರನ್ನು ಆಕ್ಷರೋತ್ಸವ – ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.

ಶಾಲು ಹೊದಿಸಿ, ಪೇಟಾ ತೊಡಿಸಿ, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಯ ಜೊತೆಗೆ, ತಲಾ ಒಂದು ಲಕ್ಷ ರೂಪಾಯಿ ನಗದು ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಧನ್ವಿ ಭಟ್ ಅವರ ತಾಯಿ ಪ್ರೀತಿಕಾ, ಅನುಪ್ರಿಯಾ ಹೆತ್ತವರಾದ ಚಂದ್ರಶೇಖರ ಪಿಕೆ, ಪೂರ್ಣಿಮಾ ಈ ಸಂದರ್ಭದಲ್ಲಿ ಜೊತೆಗಿದ್ದರು. ಅತಿಥಿಗಳಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಡಾ.ಸುಬ್ಬಣ್ಣ ರೈ, ಡಾ.ಶ್ರೀನಾಥ್ ಎಂ. ಪಿ, ಸಂಪತ್ ಸುವರ್ಣ ಹಾಗೂ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್ ಬಿ.ಎಸ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Comment

error: Content is protected !!