July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ 597 ಅಂಕಗಳ ಮೂಲಕ ರಾಜ್ಯ ಕ್ಕೆ ಎರಡನೆಯ ಸ್ಥಾನ ಪಡೆದ ಧನ್ವಿ ಭಟ್ ಹಾಗೂ 595 ಅಂಕಗಳ ಮೂಲಕ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಇವರನ್ನು ಆಕ್ಷರೋತ್ಸವ – ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.

ಶಾಲು ಹೊದಿಸಿ, ಪೇಟಾ ತೊಡಿಸಿ, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಯ ಜೊತೆಗೆ, ತಲಾ ಒಂದು ಲಕ್ಷ ರೂಪಾಯಿ ನಗದು ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಧನ್ವಿ ಭಟ್ ಅವರ ತಾಯಿ ಪ್ರೀತಿಕಾ, ಅನುಪ್ರಿಯಾ ಹೆತ್ತವರಾದ ಚಂದ್ರಶೇಖರ ಪಿಕೆ, ಪೂರ್ಣಿಮಾ ಈ ಸಂದರ್ಭದಲ್ಲಿ ಜೊತೆಗಿದ್ದರು. ಅತಿಥಿಗಳಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಡಾ.ಸುಬ್ಬಣ್ಣ ರೈ, ಡಾ.ಶ್ರೀನಾಥ್ ಎಂ. ಪಿ, ಸಂಪತ್ ಸುವರ್ಣ ಹಾಗೂ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್ ಬಿ.ಎಸ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya
error: Content is protected !!