25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ : ಏಕಾ ಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉಚ್ಚವ್ ಪುರೈ ನಿ, ಉಜ್ವ ಕಾಲಿಪ್ಪರಾ ಭರಾಯಿಚ್ ನಿವಾಸಿ ಅನಿಲ್ ಚೌಹಾಣ್ ಎಂಬವರು ಮೇ 22 ರಂದು ಅವರ ಸಂಸ್ಥೆಯ ಬಾಬ್ತು ವಾಹನದಲ್ಲಿ ಗುರುವಾಯನಕೆರೆಯಿಂದ ಉಜಿರೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸಮಯ ಮಧ್ಯಾಹ್ನ ಬೆಳ್ತಂಗಡಿ ಕಸಬಾ ಗ್ರಾಮದ ಲೋಬೋ ಮೋಟರ್ಸ್ ಅಂಗಡಿಯ ಮುಂಭಾಗ ಬರುತ್ತಿದ್ದಂತೆ ಎಡಬದಿಯಲ್ಲಿ ನಿಂತಿದ್ದ ಅನ್ಸಿ ಅಗೇರಿಯಾ ಎಂಬಾತನು ಒಮ್ಮೆಲೆ ಏಕಾ ಎಕಿ ಪಿರ್ಯಾದಿದಾರರ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಗೆ ಬಿದ್ದಾಗ ಅಲ್ಲಿ ಸೇರಿದ ಸಾರ್ವಜನಿಕರ ಸಹಾಯದಿಂದ ಆತನನ್ನು ಎತ್ತಿ ಉಪಚರಿಸಿ ನೋಡಲಾಗಿ ಸದ್ರಿ ವ್ಯಕ್ತಿಯ ಸೊಂಟದಿಂದ ಕೆಳಗೆ ಸಂಪೂರ್ಣ ಜಖಂಗೊಂಡು ಅಸ್ವಸ್ಥನಾಗಿದ್ದವನನ್ನು ಅಲ್ಲಿ ಸೇರಿದವರು ಆಟೋ ವೊಂದರಲ್ಲಿ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯಲ್ಲಿರುತ್ತಾ ಫಲಕಾರಿಯಾದೆ ಸಂಜೆ ಮೃತಪಟ್ಟಿರುವುದಾಗಿ ವರದಿಯಾಗಿದೆ .

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಯು ಡಿ ಆರ್ ನಂ 22/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya
error: Content is protected !!