23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ : ಏಕಾ ಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉಚ್ಚವ್ ಪುರೈ ನಿ, ಉಜ್ವ ಕಾಲಿಪ್ಪರಾ ಭರಾಯಿಚ್ ನಿವಾಸಿ ಅನಿಲ್ ಚೌಹಾಣ್ ಎಂಬವರು ಮೇ 22 ರಂದು ಅವರ ಸಂಸ್ಥೆಯ ಬಾಬ್ತು ವಾಹನದಲ್ಲಿ ಗುರುವಾಯನಕೆರೆಯಿಂದ ಉಜಿರೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸಮಯ ಮಧ್ಯಾಹ್ನ ಬೆಳ್ತಂಗಡಿ ಕಸಬಾ ಗ್ರಾಮದ ಲೋಬೋ ಮೋಟರ್ಸ್ ಅಂಗಡಿಯ ಮುಂಭಾಗ ಬರುತ್ತಿದ್ದಂತೆ ಎಡಬದಿಯಲ್ಲಿ ನಿಂತಿದ್ದ ಅನ್ಸಿ ಅಗೇರಿಯಾ ಎಂಬಾತನು ಒಮ್ಮೆಲೆ ಏಕಾ ಎಕಿ ಪಿರ್ಯಾದಿದಾರರ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಗೆ ಬಿದ್ದಾಗ ಅಲ್ಲಿ ಸೇರಿದ ಸಾರ್ವಜನಿಕರ ಸಹಾಯದಿಂದ ಆತನನ್ನು ಎತ್ತಿ ಉಪಚರಿಸಿ ನೋಡಲಾಗಿ ಸದ್ರಿ ವ್ಯಕ್ತಿಯ ಸೊಂಟದಿಂದ ಕೆಳಗೆ ಸಂಪೂರ್ಣ ಜಖಂಗೊಂಡು ಅಸ್ವಸ್ಥನಾಗಿದ್ದವನನ್ನು ಅಲ್ಲಿ ಸೇರಿದವರು ಆಟೋ ವೊಂದರಲ್ಲಿ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯಲ್ಲಿರುತ್ತಾ ಫಲಕಾರಿಯಾದೆ ಸಂಜೆ ಮೃತಪಟ್ಟಿರುವುದಾಗಿ ವರದಿಯಾಗಿದೆ .

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಯು ಡಿ ಆರ್ ನಂ 22/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya
error: Content is protected !!