July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ : ಏಕಾ ಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉಚ್ಚವ್ ಪುರೈ ನಿ, ಉಜ್ವ ಕಾಲಿಪ್ಪರಾ ಭರಾಯಿಚ್ ನಿವಾಸಿ ಅನಿಲ್ ಚೌಹಾಣ್ ಎಂಬವರು ಮೇ 22 ರಂದು ಅವರ ಸಂಸ್ಥೆಯ ಬಾಬ್ತು ವಾಹನದಲ್ಲಿ ಗುರುವಾಯನಕೆರೆಯಿಂದ ಉಜಿರೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸಮಯ ಮಧ್ಯಾಹ್ನ ಬೆಳ್ತಂಗಡಿ ಕಸಬಾ ಗ್ರಾಮದ ಲೋಬೋ ಮೋಟರ್ಸ್ ಅಂಗಡಿಯ ಮುಂಭಾಗ ಬರುತ್ತಿದ್ದಂತೆ ಎಡಬದಿಯಲ್ಲಿ ನಿಂತಿದ್ದ ಅನ್ಸಿ ಅಗೇರಿಯಾ ಎಂಬಾತನು ಒಮ್ಮೆಲೆ ಏಕಾ ಎಕಿ ಪಿರ್ಯಾದಿದಾರರ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಗೆ ಬಿದ್ದಾಗ ಅಲ್ಲಿ ಸೇರಿದ ಸಾರ್ವಜನಿಕರ ಸಹಾಯದಿಂದ ಆತನನ್ನು ಎತ್ತಿ ಉಪಚರಿಸಿ ನೋಡಲಾಗಿ ಸದ್ರಿ ವ್ಯಕ್ತಿಯ ಸೊಂಟದಿಂದ ಕೆಳಗೆ ಸಂಪೂರ್ಣ ಜಖಂಗೊಂಡು ಅಸ್ವಸ್ಥನಾಗಿದ್ದವನನ್ನು ಅಲ್ಲಿ ಸೇರಿದವರು ಆಟೋ ವೊಂದರಲ್ಲಿ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯಲ್ಲಿರುತ್ತಾ ಫಲಕಾರಿಯಾದೆ ಸಂಜೆ ಮೃತಪಟ್ಟಿರುವುದಾಗಿ ವರದಿಯಾಗಿದೆ .

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಯು ಡಿ ಆರ್ ನಂ 22/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!