25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ ಶೆಟ್ಟಿ ಹಾಗೂ ಅಶ್ವಿನ್‌ ಪೂಜಾರಿ ಎಂಬಾತನಿಗೂ ಎಲೆಕ್ಟ್ರೀಷಿಯನ್ ಕೆಲಸದ ವಿಚಾರವಾಗಿ ಮನಸ್ತಾಪ ಇದ್ದು, ಮೇ 20 ರಂದು ರಾತ್ರಿ ಪ್ರಕಾಶ್ ಶೆಟ್ಟಿಯವರು ಬಳೆಂಜ ಗ್ರಾಮದಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಅದೇ ಕಾರ್ಯಕ್ರಮಕ್ಕೆ ಆಶ್ವಿನ್ ತನ್ನ ತಾಯಿಯೊಂದಿಗೆ ಬಂದಿರುತ್ತಾರೆ. ಈ ವೇಳೆ ಪ್ರಶಾಂತ್ ಪೂಜಾರಿ ರವರು ಮನೆಯ ಅಂಗಳದಲ್ಲಿ ನಿಂತಿದ್ದ ಸಮಯ, ಅಶ್ವಿನ್ ಎಂಬಾತನು ಹಿಂಬದಿಯಿಂದ ಬಂದು ತಳ್ಳಿದ್ದು, ಈ ಬಗ್ಗೆ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದಾಗ. ಆರೋಪಿಯು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಈ ದೂರನ್ನು ನೀಡಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 48/2024 ಕಲಂ : 341, 323,504, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya
error: Content is protected !!