23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ ಶೆಟ್ಟಿ ಹಾಗೂ ಅಶ್ವಿನ್‌ ಪೂಜಾರಿ ಎಂಬಾತನಿಗೂ ಎಲೆಕ್ಟ್ರೀಷಿಯನ್ ಕೆಲಸದ ವಿಚಾರವಾಗಿ ಮನಸ್ತಾಪ ಇದ್ದು, ಮೇ 20 ರಂದು ರಾತ್ರಿ ಪ್ರಕಾಶ್ ಶೆಟ್ಟಿಯವರು ಬಳೆಂಜ ಗ್ರಾಮದಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಅದೇ ಕಾರ್ಯಕ್ರಮಕ್ಕೆ ಆಶ್ವಿನ್ ತನ್ನ ತಾಯಿಯೊಂದಿಗೆ ಬಂದಿರುತ್ತಾರೆ. ಈ ವೇಳೆ ಪ್ರಶಾಂತ್ ಪೂಜಾರಿ ರವರು ಮನೆಯ ಅಂಗಳದಲ್ಲಿ ನಿಂತಿದ್ದ ಸಮಯ, ಅಶ್ವಿನ್ ಎಂಬಾತನು ಹಿಂಬದಿಯಿಂದ ಬಂದು ತಳ್ಳಿದ್ದು, ಈ ಬಗ್ಗೆ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದಾಗ. ಆರೋಪಿಯು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಈ ದೂರನ್ನು ನೀಡಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 48/2024 ಕಲಂ : 341, 323,504, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya
error: Content is protected !!