September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ ಶೆಟ್ಟಿ ಹಾಗೂ ಅಶ್ವಿನ್‌ ಪೂಜಾರಿ ಎಂಬಾತನಿಗೂ ಎಲೆಕ್ಟ್ರೀಷಿಯನ್ ಕೆಲಸದ ವಿಚಾರವಾಗಿ ಮನಸ್ತಾಪ ಇದ್ದು, ಮೇ 20 ರಂದು ರಾತ್ರಿ ಪ್ರಕಾಶ್ ಶೆಟ್ಟಿಯವರು ಬಳೆಂಜ ಗ್ರಾಮದಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಅದೇ ಕಾರ್ಯಕ್ರಮಕ್ಕೆ ಆಶ್ವಿನ್ ತನ್ನ ತಾಯಿಯೊಂದಿಗೆ ಬಂದಿರುತ್ತಾರೆ. ಈ ವೇಳೆ ಪ್ರಶಾಂತ್ ಪೂಜಾರಿ ರವರು ಮನೆಯ ಅಂಗಳದಲ್ಲಿ ನಿಂತಿದ್ದ ಸಮಯ, ಅಶ್ವಿನ್ ಎಂಬಾತನು ಹಿಂಬದಿಯಿಂದ ಬಂದು ತಳ್ಳಿದ್ದು, ಈ ಬಗ್ಗೆ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದಾಗ. ಆರೋಪಿಯು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಈ ದೂರನ್ನು ನೀಡಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 48/2024 ಕಲಂ : 341, 323,504, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya
error: Content is protected !!