25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಮೇ 22 ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಭಾರತ ದೇಶದ ಪ್ರಸಕ್ತ ಸನ್ನಿವೇಶ ಹಾಗೂ ಇದಕ್ಕಿರುವ ಪರಿಹಾರವನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು.
ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಸಮಾರೋಪ ಭಾಷಣವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸುಹೈಲ್ ಖಾನ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಇನಾಸ್ ರೋಡ್ರಿಗಸ್, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿ ಅಶ್ರಫ್ ಕಟ್ಟೆ ಹಾಗೂ ಕ್ಷೇತ್ರ ವ್ಯಾಪ್ತಿಯ ಎಲ್ಲಾ ನಾಯಕರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya
error: Content is protected !!