ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

ಗುರುವಾಯನಕೆರೆ: ಶ್ರೀ ನಾಗ ರಕ್ತೇಶ್ವರಿ ಹಾಗು ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರ ಪಣೆಜಾಲು ವಿನ ಪ್ರತಿಷ್ಠ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ ರೂ. 50000 ದೇಣಿಗೆ ಹಸ್ತಾಂತರ ವನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ದೇಣಿಗೆ ಪಡೆದುಕೊಂಡು ಮಾತನಾಡಿದ ನಾಗ ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಆನಂದ ಶೆಟ್ಟಿಯವರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳಾದ ಡಾ.ಡಿ . ವೀರೇಂದ್ರ ಹೆಗ್ಗಡೆಯವರು ನೀಡುವ ದೇಣಿಗೆಗಳಿಂದ ದೇವಸ್ಥಾನಗಳ ಜೀರ್ಣೋದ್ದಾರ ಕೆಲಸಗಳಿಗೆ ವೇಗ ಸಿಕ್ಕಿರುತ್ತದೆ ಹಾಗೂ ಜೀರ್ಣೋದ್ಧಾರದ ಕೆಲಸ ಕಾರ್ಯಗಳು ಅಚ್ಚುಕಟ್ಟಾಗಿ ಮಾಡಲು ಸಹಕಾರಿಯಾಗಿದೆ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೆರವು ಅನನ್ಯ ವಾಗಿದೆ ಎಂದು ಪ್ರಶಂಸಿದರು.

ಕೋಶಾಧಿಕಾರಿ ಸತೀಶ್ ಕುಲಾಲ್, ಸದಸ್ಯರಾದ ನೋಣಯ್ಯ ಗೌಡ, ಹರೀಶ್ ಗೌಡ, ಶಂಕರ ಸಪಲ್ಯ, ಸತೀಶ್ ಗೌಡ, ಒಕ್ಕೂಟದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ, ವಲಯ ಮೇಲ್ವಿಚಾರಕ ರಾದ ಶ್ರೀಮತಿ ಯಶೋದಾ, ಸೇವಾ ಪ್ರತಿನಿಧಿ ಫೆಲ್ಸಿಟ ಉಪಸ್ಥಿತರಿದ್ದರು.

Related posts

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya
error: Content is protected !!