25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

ಗುರುವಾಯನಕೆರೆ: ಶ್ರೀ ನಾಗ ರಕ್ತೇಶ್ವರಿ ಹಾಗು ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರ ಪಣೆಜಾಲು ವಿನ ಪ್ರತಿಷ್ಠ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ ರೂ. 50000 ದೇಣಿಗೆ ಹಸ್ತಾಂತರ ವನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ದೇಣಿಗೆ ಪಡೆದುಕೊಂಡು ಮಾತನಾಡಿದ ನಾಗ ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಆನಂದ ಶೆಟ್ಟಿಯವರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳಾದ ಡಾ.ಡಿ . ವೀರೇಂದ್ರ ಹೆಗ್ಗಡೆಯವರು ನೀಡುವ ದೇಣಿಗೆಗಳಿಂದ ದೇವಸ್ಥಾನಗಳ ಜೀರ್ಣೋದ್ದಾರ ಕೆಲಸಗಳಿಗೆ ವೇಗ ಸಿಕ್ಕಿರುತ್ತದೆ ಹಾಗೂ ಜೀರ್ಣೋದ್ಧಾರದ ಕೆಲಸ ಕಾರ್ಯಗಳು ಅಚ್ಚುಕಟ್ಟಾಗಿ ಮಾಡಲು ಸಹಕಾರಿಯಾಗಿದೆ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೆರವು ಅನನ್ಯ ವಾಗಿದೆ ಎಂದು ಪ್ರಶಂಸಿದರು.

ಕೋಶಾಧಿಕಾರಿ ಸತೀಶ್ ಕುಲಾಲ್, ಸದಸ್ಯರಾದ ನೋಣಯ್ಯ ಗೌಡ, ಹರೀಶ್ ಗೌಡ, ಶಂಕರ ಸಪಲ್ಯ, ಸತೀಶ್ ಗೌಡ, ಒಕ್ಕೂಟದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ, ವಲಯ ಮೇಲ್ವಿಚಾರಕ ರಾದ ಶ್ರೀಮತಿ ಯಶೋದಾ, ಸೇವಾ ಪ್ರತಿನಿಧಿ ಫೆಲ್ಸಿಟ ಉಪಸ್ಥಿತರಿದ್ದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya
error: Content is protected !!