22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ : ಏಕಾ ಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉಚ್ಚವ್ ಪುರೈ ನಿ, ಉಜ್ವ ಕಾಲಿಪ್ಪರಾ ಭರಾಯಿಚ್ ನಿವಾಸಿ ಅನಿಲ್ ಚೌಹಾಣ್ ಎಂಬವರು ಮೇ 22 ರಂದು ಅವರ ಸಂಸ್ಥೆಯ ಬಾಬ್ತು ವಾಹನದಲ್ಲಿ ಗುರುವಾಯನಕೆರೆಯಿಂದ ಉಜಿರೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸಮಯ ಮಧ್ಯಾಹ್ನ ಬೆಳ್ತಂಗಡಿ ಕಸಬಾ ಗ್ರಾಮದ ಲೋಬೋ ಮೋಟರ್ಸ್ ಅಂಗಡಿಯ ಮುಂಭಾಗ ಬರುತ್ತಿದ್ದಂತೆ ಎಡಬದಿಯಲ್ಲಿ ನಿಂತಿದ್ದ ಅನ್ಸಿ ಅಗೇರಿಯಾ ಎಂಬಾತನು ಒಮ್ಮೆಲೆ ಏಕಾ ಎಕಿ ಪಿರ್ಯಾದಿದಾರರ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಗೆ ಬಿದ್ದಾಗ ಅಲ್ಲಿ ಸೇರಿದ ಸಾರ್ವಜನಿಕರ ಸಹಾಯದಿಂದ ಆತನನ್ನು ಎತ್ತಿ ಉಪಚರಿಸಿ ನೋಡಲಾಗಿ ಸದ್ರಿ ವ್ಯಕ್ತಿಯ ಸೊಂಟದಿಂದ ಕೆಳಗೆ ಸಂಪೂರ್ಣ ಜಖಂಗೊಂಡು ಅಸ್ವಸ್ಥನಾಗಿದ್ದವನನ್ನು ಅಲ್ಲಿ ಸೇರಿದವರು ಆಟೋ ವೊಂದರಲ್ಲಿ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯಲ್ಲಿರುತ್ತಾ ಫಲಕಾರಿಯಾದೆ ಸಂಜೆ ಮೃತಪಟ್ಟಿರುವುದಾಗಿ ವರದಿಯಾಗಿದೆ .

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಯು ಡಿ ಆರ್ ನಂ 22/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!