27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ ಶೆಟ್ಟಿ ಹಾಗೂ ಅಶ್ವಿನ್‌ ಪೂಜಾರಿ ಎಂಬಾತನಿಗೂ ಎಲೆಕ್ಟ್ರೀಷಿಯನ್ ಕೆಲಸದ ವಿಚಾರವಾಗಿ ಮನಸ್ತಾಪ ಇದ್ದು, ಮೇ 20 ರಂದು ರಾತ್ರಿ ಪ್ರಕಾಶ್ ಶೆಟ್ಟಿಯವರು ಬಳೆಂಜ ಗ್ರಾಮದಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಅದೇ ಕಾರ್ಯಕ್ರಮಕ್ಕೆ ಆಶ್ವಿನ್ ತನ್ನ ತಾಯಿಯೊಂದಿಗೆ ಬಂದಿರುತ್ತಾರೆ. ಈ ವೇಳೆ ಪ್ರಶಾಂತ್ ಪೂಜಾರಿ ರವರು ಮನೆಯ ಅಂಗಳದಲ್ಲಿ ನಿಂತಿದ್ದ ಸಮಯ, ಅಶ್ವಿನ್ ಎಂಬಾತನು ಹಿಂಬದಿಯಿಂದ ಬಂದು ತಳ್ಳಿದ್ದು, ಈ ಬಗ್ಗೆ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದಾಗ. ಆರೋಪಿಯು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಈ ದೂರನ್ನು ನೀಡಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 48/2024 ಕಲಂ : 341, 323,504, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya
error: Content is protected !!